Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ : ರೈಲ್ವೆ ಪ್ರಯಾಣಿಕರಿಗೆ ವಿಶೇಷ ಸೂಚನೆ

 

ಬೆಳಗಾವಿ: ಪ್ರಯಾಣಿಕರ ಅನುಕೂಲಕ್ಕಾಗಿ, ಬೆಳಗಾವಿ ಮತ್ತು ಮೀರಜ್ ನಿಲ್ದಾಣಗಳ ನಡುವಿನ ಕಾಯ್ದಿರಿಸದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ.

ರೈಲುಗಳ ಸಂಖ್ಯೆ 07301/07302 ಬೆಳಗಾವಿ-ಮೀರಜ್-ಬೆಳಗಾವಿ ಮತ್ತು 07303/07304 ಬೆಳಗಾವಿ-ಮಿರಜ್- ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರವನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ. ಇದಕ್ಕೂ ಮೊದಲು ಈ ರೈಲುಗಳ ಸಂಚಾರವನ್ನು ಜನವರಿ 31, 2025 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲುಗಳು ಅಸ್ತಿತ್ವದಲ್ಲಿರುವ ಸಮಯ ಮತ್ತು ನಿಲುಗಡೆಗಳೊಂದಿಗೆ ಚಲಿಸುತ್ತವೆ.

ರೈಲು ಸಂಚಾರ ಭಾಗಶಃ ರದ್ದು ಮುಂದುವರಿಕೆ

ಕ್ಯಾಸಲ್ ರಾಕ್-ಲೋಂಡಾ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ರೈಲು ಸಂಖ್ಯೆ 17333/17334 ರ ಭಾಗಶಃ ರದ್ದತಿಯನ್ನು ವಿಸ್ತರಿಸಲಾಗುತ್ತಿದೆ.

ಫೆಬ್ರವರಿ 28, 2025 ರವರೆಗೆ, ರೈಲು ಸಂಖ್ಯೆ 17333 ಮೀರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಲೋಂಡಾವರೆಗೂ ಮಾತ್ರ ಸಂಚರಿಸಲಿದೆ. ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವಿನ ಪ್ರಯಾಣ ರದ್ದುಗೊಳಿಸಲಾಗಿದೆ.

ಫೆಬ್ರವರಿ 28, 2025 ರವರೆಗೆ, ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮೀರಜ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಕ್ಯಾಸಲ್ ರಾಕ್ ನಿಲ್ದಾಣದ ಬದಲು ಲೋಂಡಾ ನಿಲ್ದಾಣದಿಂದ ಹೊರಡಲಿದೆ. ಕ್ಯಾಸಲ್ ರಾಕ್ ಮತ್ತು ಲೋಂಡಾ ನಿಲ್ದಾಣಗಳ ನಡುವಿನ ಪ್ರಯಾಣ ರದ್ದುಗೊಂಡಿದೆ. ಈ ಮೊದಲು, ಈ ರೈಲುಗಳನ್ನು ಜನವರಿ 31, 2025 ರವರೆಗೆ ಭಾಗಶಃ ರದ್ದುಗೊಳಿಸಲು ಸೂಚಿಸಲಾಗಿತ್ತು, ಅದನ್ನು ಈಗ ವಿಸ್ತರಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ