Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ: ಹಾಲಿ ಅಧ್ಯಕ್ಷ ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಅವರು ಪುನರಾಯ್ಕೆಯಾಗಿದ್ದಾರೆ.

ಷಡಾಕ್ಷರಿ ಅವರು 507 ಮತಗಳು ಹಾಗೂ ಬಿ.ಪಿ. ಕೃಷ್ಣಗೌಡ ಅವರು 442 ಮತಗಳನ್ನು ಪಡೆದರು. ಷಡಾಕ್ಷರಿ ಅವರು 65 ಮತಗಳ ಅಂತರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎ. ಹನುಮನರಸಯ್ಯ ಘೋಷಿಸಿದರು.

ಖಜಾಂಚಿ ಸ್ಥಾನಕ್ಕೆ ಶಿವರುದ್ರಯ್ಯ ವಿ.ವಿ. ಆಯ್ಕೆ:

ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಷಡಾಕ್ಷರಿ ಬಣದ ನಾಗರಾಜ ಆ‌ರ್. ಜುಮ್ಮನ್ನವರ ಅವರು ಸೋಲು ಕಂಡಿದ್ದು, ಕೃಷ್ಣಗೌಡ ಬಣದ ಶಿವರುದ್ರಯ್ಯ ವಿ.ವಿ. 18 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ಶಿವರುದ್ರಯ್ಯ 485 ಮತಗಳನ್ನು ಪಡೆದರೆ, ನಾಗರಾಜ ಅವರು 467 ಪಡೆದರು.

ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಷಡಾಕ್ಷರಿ ಬಣದ ನಾಗರಾಜ ಆ‌ರ್. ಜುಮ್ಮನ್ನವರ ಅವರು ಸೋಲು ಕಂಡಿದ್ದು, ಕೃಷ್ಣಗೌಡ ಬಣದ ಶಿವರುದ್ರಯ್ಯ ವಿ.ವಿ. 18 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ಶಿವರುದ್ರಯ್ಯ 485 ಮತಗಳನ್ನು ಪಡೆದರೆ, ನಾಗರಾಜ ಅವರು 467 ಪಡೆದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯಿಂದ ಆರಂಭಗೊಂಡು ರಾಜ್ಯ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆ ಸೆ. 17ರಿಂದ ವಿವಿಧ ಹಂತದಲ್ಲಿ ಆರಂಭವಾಗಿತ್ತು. ಮೊದಲ ಹಂತದಲ್ಲಿ ಮೂರು ಶೈಕ್ಷಣಿಕ ಜಿಲ್ಲೆ ಒಳಗೊಂಡ 33 ಜಿಲ್ಲೆಗಳು ಹಾಗೂ 191 ತಾಲ್ಲೂಕುಗಳ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ನಂತರ ಆಯಾ ತಾಲ್ಲೂಕು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು, ಖಜಾಂಜಿ ಹಾಗೂ ರಾಜ್ಯ ಪರಿಷತ್‌ ಸದಸ್ಯರನ್ನು ಆಯ್ಕೆ ಮಾಡಲಾಗಿತ್ತು.

ತಾಲ್ಲೂಕು, ಜಿಲ್ಲಾ ಘಟಕಗಳ ತಲಾ ನಾಲ್ವರು ಪದಾಧಿಕಾರಿಗಳು ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಯ 102 ರಾಜ್ಯ ಪರಿಷತ್ ಸದಸ್ಯರು ಹಾಗೂ ಎಂಟು ಯೋಜನಾ ಘಟಕಗಳ ಪದಾಧಿಕಾರಿಗಳು ಶುಕ್ರವಾರ ಕಬ್ಬನ್ ಉದ್ಯಾನದ ನೌಕರರ ಸಂಘದ ಕಚೇರಿ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಮತ ಚಲಾಯಿಸಿದರು. ಮತದಾನದ ನಂತರ ಮತ ಎಣಿಕೆ ಕಾರ್ಯ ನಡೆಯಿತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?