Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಕೊನೆಗೂ ಪತ್ತೆ

ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ 20 ವರ್ಷಗಳ ಹಿಂದೆ ಸಿಲಿಂಡರ್ ಕಳ್ಳತನ ಮಾಡಿದ್ದ ಆರೋಪಿ ರಾಜು ಪ್ರತಾಪರಾವ್ ಚಂದವಾನಿ (65) ( ಸಾ : ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ) ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೋಗಿ ಮರಳಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 2005 ರಿಂದ ತಲೆಮರೆಸಿಕೊಂಡಿದ್ದ.

ಆರೋಪಿತನ ಪತ್ತೆಗಾಗಿ ಬೆಳಗಾವಿ ಎಸ್ ಪಿ ಭೀಮಾಶಂಕರ ಗುಳೇದ ಮಾರ್ಗದರ್ಶನದಂತೆ ಗೋಕಾಕ ಡಿಎಸ್.ಪಿ ಡಿ.ಹೆಚ್.ಮುಲ್ಲಾ ಹಾಗೂ ಸಂಕೇಶ್ವರ ಸಿಪಿಐ ಎಸ್.ಎಂ.ಅವಜಿ ಅವರ ನೇತ್ರತ್ವದಲ್ಲಿ ಠಾಣೆಯ ಸಿಬ್ಬಂದಿರವರಾದ ಎಸ್.ಆರ್.ಬೇವಿನಕಟ್ಟಿ ಮತ್ತು ಯು.ಎಂ. ಕಾಂಬಳೆ ಅವರಿಗೆ ನೇಮಕ ಮಾಡಲಾಗಿತ್ತು. ಇವರ ಸತತ ಪ್ರಯತ್ನ ಮತ್ತು ಕಠಿಣ ಪರಿಶ್ರಮದಿಂದ ತಲೆ ಮರೆಸಿಕೊಂಡಿದ್ದ ಆರೋಪಿತನಿಗೆ 01-05-2025 ರಂದು ಕೊಲ್ಲಾಪುರದ ನ್ಯೂ ಶಾಹುಪುರಿಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದು, ನಂತರ ಆರೋಪಿತನಿಗೆ ಮಾನ್ಯ ಸಂಕೇಶ್ವರ ಜೆ ಎಂ ಎಫ್ ಸಿ ನ್ಯಾಯಾಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪತ್ತೆ ಕಾರ್ಯ ಕೈಗೊಂಡ ಅಧಿಕಾರಿ ಸಿಬ್ಬಂದಿಯವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ಅಧಿಕ್ಷಕ ಭೀಮಾಶಂಕರ್ ಗುಳೇದ ಅವರು ಶ್ಲಾಘಿಸಿ ಪ್ರಶಂಶೆ ವ್ಯಕ್ತಪಡಿಸಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ