Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮರಾಠಿಯಲ್ಲಿ ದಾಖಲೆ ಕೊಡಲು ಒತ್ತಾಯ : ಗೊಂದಲಮಯವಾದ ಬೆಳಗಾವಿ ಪಾಲಿಕೆ ಸಭೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ನಡೆದ ಮಹಾನಗರ ಪಾಲಿಕೆಯ ಪರಿಷತ್‌ ಸಭೆಯಲ್ಲಿ ನಡಾವಳಿ ಮುಂತಾದ ದಾಖಲೆಗಳನ್ನು ಮರಾಠಿಯಲ್ಲಿ ನೀಡಬೇಕೆಂಬ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಸದಸ್ಯರ ಎಂದಿನಂತೆ ಕೇಳಿ ಬಂದ ಒತ್ತಾಯ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು.

ಎಂಇಎಸ್ ಬೆಂಬಲಿತ ಸದಸ್ಯರಾದ ಶಿವಾಜಿ ಮಂಡೋಳಕರ, ವೈಶಾಲಿ ಭಾತಕಾಂಡೆ ಬೆಂಬಲ ಸೂಚಿಸಿದರು.

ಇದಕ್ಕೆ ತಿರುಗೇಟು ನೀಡಿದ ಕರ್ನಾಟಕ ಸರಕಾರದ ನಾಮನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ಅವರು, ಮಹಾರಾಷ್ಟ್ರದ ಅಕ್ಕಲಕೋಟೆ, ಜತ್ತ, ಸೊಲ್ಲಾಪುರದಲ್ಲಿ ಅಪ್ಪಟ ಕನ್ನಡಿಗರೇ ಹೆಚ್ಚಿದ್ದಾರೆ. ಆದರೆ, ಅಲ್ಲಿ ಮರಾಠಿಯಲ್ಲಿ ಮಾತ್ರ ದಾಖಲೆ‌ ನೀಡಲಾಗುತ್ತಿದೆ. ಕನ್ನಡದಲ್ಲಿ ದಾಖಲೆ ಕೊಡುತ್ತಿಲ್ಲ. ಬೆಳಗಾವಿ ಪಾಲಿಕೆಯಲ್ಲಿ ಮರಾಠಿಯಲ್ಲಿ ನಡಾವಳಿ ಕೊಡಬಾರದು. ಈ ಹಿಂದಿನ ಸಭೆಗಳಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಇದೇ ವಿಷಯವಾಗಿ ತಂಟೆ-ತಕರಾರು ಮಾಡುತ್ತಾ ಬಂದಿರುವುದನ್ನು ಅವರು ಸಭೆಯ ಗಮನಕ್ಕೆ ತಂದರು. ಯಾವುದೇ ಕಾರಣಕ್ಕೆ ಮರಾಠಿಯಲ್ಲಿ ನಡಾವಳಿ ನೀಡದಂತೆ ಅವರು ಒತ್ತಾಯಿಸಿದರು.

ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ ಅವರು, ಪರಿಷತ್ ಸಭೆಯ ಕಾರ್ಯಸೂಚಿ ಪ್ರಕಾರವೇ ಸದ‌ನ ನಡೆಯಲಿ. ಅವಕಾಶ ಸಿಕ್ಕಾಗ ಸಾಳುಂಕೆ ಮಾತನಾಡಬೇಕು ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿ ಸದಸ್ಯರು, ರವಿ ಸಾಳುಂಕೆ ವಿರುದ್ಧ ಕಿಡಿಕಾರಿದರು. ನಾಡವಿರೋಧಿ ನಿಲುವು ತಳೆದ ಸದಸ್ಯನನ್ನು ಅನರ್ಹಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತರೂಢ ಸದಸ್ಯರು ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರ ನಡುವೆ ತೀವ್ರ ವಾಗ್ವಾದ ಜೋರಾಗುತ್ತಿದ್ದಂತೆ, ಮೇಯರ್ ಮಂಗೇಶ ಪವಾರ ಐದು ನಿಮಿಷವನ್ನು ಸಭೆ ಮುಂದೂಡಿದರು.

ಕಾಂಗ್ರೆಸ್ ಸದಸ್ಯರ ಬೆಂಬಲದಿಂದಲೇ ರವಿ ಸಾಳುಂಕೆ ಈ ರೀತಿ ವರ್ತಿಸುತ್ತಿದ್ದಾರೆ. ಶಾಸಕ ಆಸಿಫ್ ಸೇಠ್ ಇಂಥವರನ್ನು ನಿಯಂತ್ರಿಸಬೇಕು ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ನಂತರ ಸಭೆ ಮತ್ತೆ ಸೇರಿತು. ನಿಯಮದಂತೆ ಎಲ್ಲ ಸದಸ್ಯರು ಮಾತನಾಡಬೇಕು. ಏಕಾಏಕಿ ಯಾವುದೇ ವಿಷಯ ಪ್ರಸ್ತಾಪಿಸಿ ಗೊಂದಲ ಸೃಷ್ಟಿಸಬಾರದು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು.

ಸದಸ್ಯರು ನಿಯಮಾವಳಿ ಪಾಲಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಮಂಗೇಶ ಪವಾರ ತಿಳಿಸಿದರು.

ಒಟ್ಟಾರೆಯಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಂಬಲಿತ ಸದಸ್ಯರ ಇಂದಿನ ಭಾಷಾ ವಿವಾದ ಪಾಲಿಕೆ ಸಭೆಯಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಯಿತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?