Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಿಕ್ಷಣದ ಪ್ರಯೋಗಾಲಯವೇ ರಂಗಭೂಮಿ : ಬಾಬಾ ಸಾಹೇಬ ಕಾಂಬಳೆ

ಬೆಳಗಾವಿ : ಶುಕ್ರವಾರದಂದು ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಕನ್ನಡ ಸಂಘ ಹಾಗೂ ಐಕ್ಯೂಎಸಿ ಅಡಿಯಲ್ಲಿ ಪಠ್ಯದಲ್ಲಿ ರಂಗ ಚಟುವಟಿಕೆಗಳು - ಶಿಕ್ಷಣದಲ್ಲಿ ರಂಗಭೂಮಿಯ ಮಹತ್ವತೆ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಹಿರಿಯ ರಂಗಕರ್ಮಿ, ನಟ, ನಿರ್ದೇಶಕ ಹಾಗೂ ನಾಟಕ ರಚನಾಕಾರ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬಾಬಾಸಾಹೇಬ ಕಾಂಬಳೆ ಅವರು,
ಸ್ವಾತಂತ್ರ್ಯ ಚಳವಳಿಗಳಿಗೆ ರಂಗಭೂಮಿ ಅಪಾರ ಕೊಡುಗೆಯನ್ನು ನೀಡಿದೆ. ರಂಗಭೂಮಿಯಲ್ಲಿ ಸತ್ಯದ ಹುಡುಕಾಟ ನಡೆಯುತ್ತಿರುತ್ತದೆ. ಈ ಹುಡುಕಾಟದ ಮಾರ್ಗವೇ ಶಿಕ್ಷಣ. ಶಿಕ್ಷಣ ಮತ್ತು ರಂಗಭೂಮಿ ಮೂಲಕ ಕ್ರಾಂತಿ ಮಾಡಿ ಪರಿಸರ ಸಂರಕ್ಷಣೆ ಮಾಡಲು ಸಾಧ್ಯವಿದೆ. ನಶಿಸಿ ಹೋಗುತ್ತಿರುವ ರಂಗಭೂಮಿ ಯ ಉಳಿಯುವಿಕೆ ಶಿಕ್ಷಣ ರಂಗದಲ್ಲಿದೆ. ರಂಗಕಲೆ ಎನ್ನುವುದು ಕೇವಲ ವೇದಿಕೆ ಮೇಲೆ ಸಂಭಾಷಣೆ ಹೇಳುವುದಲ್ಲ. ಅದು ಜೀವನದ ಎಲ್ಲ ಕ್ಷೇತ್ರದಲ್ಲಿ ಆವರಿಸಿರುತ್ತದೆ. ಶಿಕ್ಷಕರು ಪ್ರಪಂಚದ ಎಲ್ಲ ಸ್ತರದ ವ್ಯಕ್ತಿಗಳೊಡನೆ ಸಂವಾದಿಸಬೇಕು, ಆಳವಾದ ಅಧ್ಯಯನ ವ್ಯಾಪಕವಾದ ಸಂಚಾರ ಮಾಡ ಬೇಕು . ಶಿಕ್ಷಣದ ಮೂಲ ತತ್ವ ಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವ ಅದ್ಭುತ ಶಕ್ತಿ ರಂಗಭೂಮಿಗೆ ಇದೆ. ರಂಗಭೂಮಿ ಶಿಕ್ಷಕರ ನಿಜವಾದ ಬದುಕಾಗಿದೆ. ರಂಗಭೂಮಿ ನಿಡುವ ಅಪಾರವಾದ ಸಾಹಿತ್ಯ ಹಾಗೂ ಅನುಭವವನ್ನು ಸ್ವೀಕರಿಸಿ ಒಬ್ಬ ಪರಿಪೂರ್ಣ ಶಿಕ್ಷಕರಾಗಬೇಕೆಂದು ಹೇಳಿದರು.

ಶಿಕ್ಷಕರಲ್ಲಿ ಅಂತರ್ಗತವಾಗಿರುವ ಕಲಾತ್ಮಕವಾಗಿರುವ ಪ್ರತಿಭೆಯನ್ನು ಪ್ರದರ್ಶಿಸಿದೇ ಇದ್ದರೆ ಅವರ ಜೀವನ ಕಾರ್ಯ ನಿರರ್ಥಕವಾಗುತ್ತದೆಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯೆ, ರಂಗಕರ್ಮಿ ಹಾಗೂ ಲೇಖಕಿ ಡಾ.ನಿರ್ಮಲಾ ಜಿ ಬಟ್ಟಲ ಅವರು, ಬಾಬಾ ಸಾಹೇಬ ಕಾಂಬಳೆ ಅವರ ಜೀವನ ಹಾಗೂ ಸಾಧನೆಗಳನ್ನು ಮುಕ್ತವಾಗಿ ಪ್ರಶಂಸಿಸಿದರು. ನಮ್ಮ ಅಂತರಂಗ ಹಾಗೂ ಬಹಿರಂಗ ಪರಿಶುದ್ಧಗೊಳ್ಳಬೇಕಾದರೆ ರಂಗಭೂಮಿಯ ಜ್ಞಾನ ಅವಶ್ಯಕ. ಶಿಕ್ಷಕರಲ್ಲಿ ಭಾಷೆ ಹಾಗೂ ಭಾವ ಪ್ರಕಾಶಿಕೆ ಸುಂದರಗೊಳ್ಳಬೇಕಾದರೆ ಶಿಕ್ಷಣದಲ್ಲಿ ರಂಗಭೂಮಿ ಮಹತ್ವ ಹೆಚ್ಚಾಗಿದೆಂದು ಹೇಳಿದರು.

ಬಾಬಾಸಾಹೇಬ ಕಾಂಬಳೆ ಅವರನ್ನು ಮಹಾವಿದ್ಯಾಲಯದ ಪರವಾಗಿ ಸನ್ಮಾನಿಸಲಾಯಿತು.
ಸಂಜೆಯವರೆಗೆ ಡಾ.ನಿರ್ಮಲಾ ಬಟ್ಟಲ ರವರ ನೇತೃತ್ವದಲ್ಲಿ ರಂಗಭೂಮಿ ಕುರಿತು ಕಾರ್ಯಾಗಾರ ನಡೆಯಿತು.
ಪ್ರಶಿಕ್ಷಣಾರ್ಥಿ ಮುಸ್ಕಾನ ಲಾಡನ್ನವರು ಪ್ರಾರ್ಥಿಸಿದರು, ಡಾ.ಎಸ್.ವಿ.ವಾಲಿಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು. ಪ್ರೊ.ಮಂಜುನಾಥ ಕಲಾಲ ನಿರೂಪಿಸಿದರು. ಪ್ರೊ.ಸೋನಲ್ ಚಿನಿವಾಲ, ಡಾ. ಗೀತಾ ದಯಣ್ಣವರ, ಪ್ರೊ. ಸುನಿಲ ಪಾಣಿ, ಪ್ರೊ.ಮಲ್ಲಿಕಾರ್ಜುನ ಜಮಖಂಡಿ ಹಾಗೂ ದ್ವಿತೀಯ , ನಾಲ್ಕನೇ ಸೆಮಿಸ್ಟರ್ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ
ಎಂ.ಇಡಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ