Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಲ್ವರು ಅಮಾಯಕರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

ಗದಗ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಾಲ್ವರು ಅಮಾಯಕರ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ತಂದೆ-ತಾಯಿ ಕೊಲೆಗೆ ಸುಪಾರಿ ಕೊಟ್ಟಿದ್ದ ಹಿರಿಯ ಮಗ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಗದಗ ಎಸ್​​ಪಿ ಬಿ.ಎಸ್. ನೇಮಗೌಡ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಘಟನೆ ನಡೆದ 48 ಗಂಟೆಗಳ ಒಳಗಾಗಿಯೇ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಗದಗ ಉತ್ತರ ವಲಯ ಐಜಿಪಿ ವಿಕಾಸಕುಮಾರ ಅವರು ತಿಳಿಸಿದ್ದಾರೆ.
ದೂರುದಾರ ಪ್ರಕಾಶ ಬಾಕಳೆ ಅವರ ಮೊದಲ ಹೆಂಡತಿಯ ಹಿರಿಯ ಮಗ ವಿನಾಯಕ ಬಾಕಳೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಕೊಲೆ ಮಾಡಲು ಸುಪಾರಿ ಪಡೆದ ಗದಗ ರಾಜೀವಗಾಂಧಿ ನಗರ ನಿವಾಸಿ ಫಿರೋಜ್ ನಿಸಾರ ಅಹ್ಮದ್ ಖಾಜಿ(29), ಹುಡ್ಕೋ ನಿವಾಸಿ ಜಿಶಾನ್ ಮೆಹಬೂಬಅಲಿ ಖಾಜಿ(24) ಹಾಗೂ ಮಹಾರಾಷ್ಟ್ರದ ಮೀರಜ್ ನಿವಾಸಿಗಳಾದ ಸಾಹಿತ್ ಅಷ್ಪಾಕ್ ಖಾಜಿ(19), ಸೋಹೆಲ್ ಅಷ್ಪಾಕ್ ಖಾಜಿ(19), ಸುಲ್ತಾನ್ ಜಿಲಾನಿ ಖಾಜಿ(23), ಮಹೇಶ ಜಗನ್ನಾಥ ಸಾಳೋಂಕೆ (21), ವಾಹಿದ ಲಿಯಾಕತ್ ಬೇಪಾರಿ(21) ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

ಆಸ್ತಿ ವಿಚಾರವಾಗಿ ಜಗಳ :
ತಂದೆ ಪ್ರಕಾಶ ಬಾಕಳೆ ಹಾಗೂ ಮೊದಲ ಹೆಂಡತಿಯ ಹಿರಿಯ ಮಗ ವಿನಾಯಕ ಬಾಕಳೆ ಮಧ್ಯೆ ಆಸ್ತಿ ವಿಚಾರವಾಗಿ ಕೆಲ ತಿಂಗಳ ಹಿಂದೆ ಜಗಳ ನಡೆದಿತ್ತು. ತಂದೆಗೆ ಗೊತ್ತಿಲ್ಲದಂತೆ ವಿನಾಯಕ ಆಸ್ತಿಗಳನ್ನು ಮಾರಿದ್ದರಿಂದ ಪ್ರಕಾಶ ಬಾಕಳೆ ತೀವ್ರವಾಗಿ ಅಸಮಾಧಾನಗೊಂಡಿದ್ದರು. ಈ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದಿತ್ತು. ಇದೇ ಕಾರಣಕ್ಕೆ ವಿನಾಯಕ ಕೊಲೆಗೆ ಸುಪಾರಿ ನೀಡಿದ್ದ ಎನ್ನುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಐಜಿಪಿ ವಿಕಾಸಕುಮಾರ ಮಾಹಿತಿ ನೀಡಿದರು.
ಪ್ರಮುಖ ಆರೋಪಿ ವಿನಾಯಕ ಬಾಕಳೆ ಕಾರ್ ಮಾರಾಟ ಮಾಡುವ ಏಜೆಂಟ್ :
ಫಿರೋಜ್ ಹಾಗೂ ಜಿಶಾನ್ ಸಂಪರ್ಕಿಸಿ ಸುಪಾರಿ ಕೊಟ್ಟಿದ್ದಾನೆ. ಒಟ್ಟು 65 ಲಕ್ಷ ರೂಪಾಯಿಗೆ ಸುಪಾರಿ ಮಾತುಕತೆ ನಡೆದ ನಂತರ ಮುಂಗಡವಾಗಿ 2 ಲಕ್ಷ ರೂ. ನೀಡಿದ್ದಾನೆ. ಸುಪಾರಿ ಪಡೆದ ಈ ಇಬ್ಬರು ಮೀರಜ್ ನಿಂದ ಬಾಡಿಗೆ ಹಂತಕರನ್ನು ಕರೆಯಿಸಿಕೊಂಡು ಹತ್ಯೆಗೆ ಸಂಚು ರೂಪಿಸಿದ್ದಾರೆ. ಎಂಟು ಜನ ಆರೋಪಿಗಳು ಕಡಿಮೆ ಸಮಯದಲ್ಲಿ ಹೊಂಚು ಹಾಕಿ ಕೊಲೆ ಮಾಡಿದ್ದಾರೆ . ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಗದಗ ನಗರದಲ್ಲಿಯೇ ಬಂಧಿಸಲಾಗಿದೆ. ಇನ್ನುಳಿದ ಐವರನ್ನು ಮೀರಜ್‌ನಿಂದ ಬಂಧಿಸಿ ಕರೆತರಲಾಗಿದೆ ಎಂದು ತಿಳಿಸಿದರು.

ನಾಲ್ವರು ಅಮಾಯಕರ ಹತ್ಯೆ
ಘಟನೆ ದಿನ ಪ್ರಕಾಶ ಬಾಕಳೆ ಹಾಗೂ ಅವರ ಪತ್ನಿ ಸುನಂದಾ ಬೇರೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಅವರು ಸಾವಿನಿಂದ ಬಚಾವ್ ಆಗಿದ್ದಾರೆ. ಮನೆಗೆ ನುಗ್ಗಿದ್ದ ಹಂತಕರು ಪ್ರಕಾಶ ಹಾಗೂ ಸುನಂದಾ ಎಂದು ಭಾವಿಸಿ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಜೊತೆ ಇದ್ದ ಅಮಾಯಕ ಸಂಬಂಧಿಕರಾದ ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ(55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ(16) ಅವರನ್ನು ಹತ್ಯೆ ಮಾಡಿದ್ದಾರೆ.
ಅತ್ಯಂತ ಸಂಕೀರ್ಣವಾಗಿದ್ದ ಈ ಕೊಲೆ ಪ್ರಕರಣವನ್ನು ಗದಗ ಜಿಲ್ಲಾ ಪೊಲೀಸರು ಕೇವಲ 72 ಗಂಟೆಯಲ್ಲಿ ಯಶಸ್ವಿಯಾಗಿ ಬೇಧಿಸಿದ್ದಾರೆ. ಹೀಗಾಗಿ ಪೊಲೀಸರ ತಂಡಕ್ಕೆ ಡಿಜಿ ಅಲೋಕ ಮೋಹನ ಅವರು 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ. ಆದಷ್ಟು ಬೇಗ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿ, ಆರೋಪಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?