Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೆಲಿಕಾಪ್ಟರ್ ಖರೀದಿಸಿದ ರಾಜ್ಯದ ಪ್ರಭಾವಿ ಸಚಿವ

ಬೆಳಗಾವಿ: ರಾಜ್ಯದ ಪ್ರಭಾವಿ ಸಚಿವರಲ್ಲಿ ಒಬ್ಬರಾಗಿರುವ ಸತೀಶ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿ ಮಾಡಿ ಇದೀಗ ಸುದ್ದಿಯಾಗಿದ್ದಾರೆ.

ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಅನ್ನು ಸಚಿವ ಸತೀಶ ಜಾರಕಿಹೊಳಿ ಖರೀದಿಸಿದ್ದಾರೆ.

ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್ ಜಾರಕಿಹೊಳಿ ಅವರು ಈ ಹಿಂದೆ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಹೊಂದಿದ್ದರು.

ಹಳೆ ಹೆಲಿಕಾಪ್ಟರ್ ಮಾರಾಟ ಮಾಡಿ ಹೊಸ ಇಟಲಿ ಮೇಡ್ ಡಬಲ್ ಇಂಜಿನ್ ಅಗಸ್ಟ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ.

ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ಶುಕ್ರವಾರ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂಬ ವಿಷಯವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಚಿವ ಸತೀಶ ಜಾರಕಿಹೊಳಿ ಅವರು ಉತ್ತರ ಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ರಾಜ್ಯದ್ಯಂತ ಪಕ್ಷ ಸಂಘಟನೆ ಸೇರಿದಂತೆ 2028ರ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಈ ನೂತನ ಹೆಲಿಕಾಪ್ಟರ್ ಅನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದಕ್ಕೆ ಪೂರಕವಾಗಿ ನೂತನ ಹೆಲಿಕಾಪ್ಟರ್ ಪರಿಶೀಲಿಸುತ್ತಿರುವ ಸಚಿವರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದೆ. ಇನ್ನು ಎರಡು ತಿಂಗಳಲ್ಲಿ ಹಾರಾಟಕ್ಕೆ ಅಣಿಯಾಗಲಿದೆ ಎಂದು ಹೇಳಿಕೊಂಡಿದ್ದಾರೆ.

ಇತ್ತೀಚಿನ ಎಲ್ಲಾ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಡಬಲ್ ಇಂಜಿನ್ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು, ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ ಅನ್ನು ಕರೆದುಕೊಂಡು ಹೋಗುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ. ಚಾಪರ್ ಶಕ್ತಿ ಹೀರಿಕೊಳ್ಳುವ ಆಸನಗಳನ್ನು ಹೊಂದಿದೆ, ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಹೊಂದಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು