Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಇಂದಿನಿಂದ ಎರಡು ವಾರಗಳ ಕಾಲ ಅಧಿವೇಶನ ಜೋರು...ಪ್ರತಿಭಟನೆಗಳದ್ದೆ ಕಾವು.....

ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಎರಡು ವಾರಗಳ ಕಾಲ ಚಳಿಗಾಲದ ವಿಶೇಷ ಅಧಿವೇಶನ ನಡೆಯಲಿದೆ. ಮೊದಲ ದಿನವಾದ ಸೋಮವಾರ ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆ ಮಾತ್ರ ನಡೆಯಲಿದೆ. ಮಂಗಳವಾರದಿಂದ ಅಧಿವೇಶನ ಕಾವೇರಲಿದೆ.

ಆಡಳಿತ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಬಾರಿ ಮತ್ತಷ್ಟು ಪ್ರಬಲವಾಗಿ ಕಾದಾಡಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರ ಕುರಿತು ಚರ್ಚೆ ಜೋರಾಗುವ ಸಾಧ್ಯತೆ ಇದೆ. ಬೆಳಗಾವಿ ಅಧಿವೇಶನದ ಕಾಲಕ್ಕೆ ಈ ವರ್ಷವೂ ಪ್ರತಿಭಟನೆಗಳ ಸಂಖ್ಯೆ ಹೆಚ್ಚಾಗಿದ್ದು ನೂರಕ್ಕೂ ಹೆಚ್ಚು ಪ್ರತಿಭಟನೆ ನಡೆಯಲಿದೆ. ಹಳೇ ಪಿಬಿ ರಸ್ತೆ ಮತ್ತು ಸುವರ್ಣ ವಿಧಾನಸೌಧದ ಖಾಲಿ ಜಾಗದಲ್ಲಿ ಪ್ರತಿಭಟನೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ಪ್ರತಿಭಟನೆ ಕಾಲಕ್ಕೆ ಗಲಾಟೆ ಜೋರಾಗಿದ್ದರಿಂದ ಈ ಸಲ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ಭದ್ರತೆ ಇರಲಿದೆ. ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀರಿನ ವ್ಯವಸ್ಥೆ ಮುಂತಾದವುಗಳನ್ನು ಮಾಡಲಾಗಿದೆ.

ಸುವರ್ಣ ವಿಧಾನಸೌಧದ ಬಳಿಯ ಉದ್ಯಾನ ನಿರ್ವಹಣೆ, ಸ್ವಚ್ಛತೆ, ಅಡುಗೆ ಮುಂತಾದ ಕೆಲಸಗಳಿಗೆ 500 ಕ್ಕೂ ಹೆಚ್ಚು ಆಳುಗಳನ್ನು ಬಳಸಿಕೊಳ್ಳಲಾಗುತ್ತಿದೆ. ಬೆಳಗಾವಿ ನಗರ ಸುವರ್ಣಸೌಧದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿದೆ. ಅಧಿಕಾರಿಗಳು, ಸಿಬ್ಬಂದಿಗಳನ್ನು ಕರೆದೊಯ್ಯಲು 500 ಕ್ಕೂ ಹೆಚ್ಚು ವಾಹನಗಳನ್ನು ಚಾಲಕರ ಸಮೇತ ಬಳಸಿಕೊಳ್ಳಲಾಗುತ್ತಿದೆ. ವಸತಿಗೆ 3000 ಕೊಠಡಿ ಕಾಯ್ದಿರಿಸಲಾಗಿದೆ. ಸರಕಾರಿ ವಸತಿಗೃಹ, ವಿಶ್ವವಿದ್ಯಾಲಯಗಳ ಕೊಠಡಿ, ಖಾಲಿ ಇರುವ ಸರಕಾರಿ ಕಟ್ಟಡ, ಲಾಡ್ಜ್, ಕಲ್ಯಾಣ ಮಂಟಪ ಮತ್ತು ಅಪಾರ್ಟ್ಮೆಂಟ್ ಗಳನ್ನು ಸುಮಾರು 12 ದಿನಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿದೆ.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಇತ್ತೀಚಿಗೆ ಉಪಹಾರಕೂಟದಲ್ಲಿ ಭಾಗವಹಿಸಿದ್ದಾಗ 43 ಲಕ್ಷ ರೂ.ಐಷಾರಾಮಿ ಕೈ ಗಡಿಯಾರ ಧರಿಸಿದ್ದು ಚರ್ಚೆಯಾಗಲಿದೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ ಸೇರಿ ಸುಮಾರು 30 ಮಸೂದೆಗಳು ಮಂಡನೆಯಾಗಲಿವೆ. ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಹೋರಾಟ ನಡೆಸಲು ತೀರ್ಮಾನಿಸಿವೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?