Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂವರಿಗೆ ಈ ವರ್ಷದ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ಸ್ಟಾಕ್ಹೋಮ್ (ಸ್ವೀಡನ್‌): 2024ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಡಾರೊನ್ ಅಸೆಮೊಗ್ಲು, ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಅವರಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಡೇರಾನ್ ಅಸೆಮೊಗ್ಲು ಮತ್ತು ಸೈಮನ್ ಜಾನ್ಸನ್ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದರೆ, ಜೇಮ್ಸ್ ರಾಬಿನ್ಸನ್ ಚಿಕಾಗೋ ವಿಶ್ವವಿದ್ಯಾಲಯದಲ್ಲಿದ್ದಾರೆ. “ಸಂಸ್ಥೆಗಳು ಹೇಗೆ ರೂಪುಗೊಳ್ಳುತ್ತವೆ ಮತ್ತು ಸಮೃದ್ಧಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ” ಎಂಬ ಅಧ್ಯಯನಕ್ಕಾಗಿ ಈ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. “ದೇಶಗಳ ನಡುವಿನ ಆದಾಯದಲ್ಲಿನ ಅಗಾಧ ವ್ಯತ್ಯಾಸಗಳನ್ನು ಕಡಿಮೆ ಮಾಡುವುದು ನಮ್ಮ ಸಮಯದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ಇದನ್ನು ಸಾಧಿಸಲು ಸಾಮಾಜಿಕ ಸಂಸ್ಥೆಗಳ ಪ್ರಾಮುಖ್ಯತೆಯನ್ನು ಪ್ರಶಸ್ತಿ ವಿಜೇತರು ಪ್ರದರ್ಶಿಸಿದ್ದಾರೆ” ಎಂದು ಆರ್ಥಿಕ ವಿಜ್ಞಾನಗಳ ಪ್ರಶಸ್ತಿ ಸಮಿತಿಯ ಅಧ್ಯಕ್ಷ ಜಾಕೋಬ್ ಸ್ವೆನ್ಸನ್ ಹೇಳಿದ್ದಾರೆ.

“ರಾಜಕೀಯ ಸಂಸ್ಥೆಗಳು ರೂಪುಗೊಳ್ಳುವ ಮತ್ತು ಬದಲಾಗುವ ಸಂದರ್ಭಗಳನ್ನು ವಿವರಿಸುವ ಪ್ರಶಸ್ತಿ ವಿಜೇತರ ಮಾದರಿಯು 3 ಅಂಶಗಳನ್ನು ಹೊಂದಿದೆ. ಸಂಪನ್ಮೂಲಗಳನ್ನು ಹೇಗೆ ಹಂಚಿಕೆ ಮಾಡಲಾಗುತ್ತದೆ, ಸಮಾಜದಲ್ಲಿ ಯಾರು ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿದ್ದಾರೆ ಎನ್ನುವ ಸಂಘರ್ಷ ಮೊದಲನೆಯ ಅಂಶ” ಎಂದು ನೊಬೆಲ್ ಪ್ರಶಸ್ತಿ ಎಕ್ಸ್‌ (ಹಿಂಡಿನ ಟ್ವಿಟರ್)ನಲ್ಲಿ ತಿಳಿಸಿದೆ.
“ಜನಸಾಮಾನ್ಯರು ಕೆಲವೊಮ್ಮೆ ಆಳುವ ಅಧಿಕಾರ ವರ್ಗ ಬೆದರಿಕೆ ಹಾಕುವ ಅವಕಾಶವನ್ನು ಹೊಂದಿರುತ್ತಾರೆ. ಆದ್ದರಿಂದ ಸಮಾಜದಲ್ಲಿ ಅಧಿಕಾರವು ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಗಿಂತ ಹೆಚ್ಚಾಗಿದೆ. ಮೂರನೆಯದು ಬದ್ಧತೆಯ ಸಮಸ್ಯೆ. ಗಣ್ಯರು ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಜನರಿಗೆ ಹಸ್ತಾಂತರಿಸುವುದು ಇದಕ್ಕಿರುವ ಏಕೈಕ ಪರ್ಯಾಯ ಮಾರ್ಗ” ಎಂದು ಎಕ್ಸ್‌ನಲ್ಲಿ ವಿವರಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು