Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲ್ಯಾಂಡರ್, ರೋವರ್ ಪಾಲಿಗೆ ಇಂದು ನಿರ್ಣಾಯಕ ದಿನ

 

ಬೆಂಗಳೂರು :
ಚಂದ್ರಯಾನ-3 ಅಂಗವಾಗಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದಿರುವ ಲ್ಯಾಂಡರ್ ಹಾಗೂ ರೋವರ್ ಉಪಕರಣಗಳನ್ನು ‘14 ದಿನಗಳ ನಿದ್ರೆಯಿಂದ ಎಚ್ಚರಿಸಲು’ ಇಸ್ರೋ ಶುಕ್ರವಾರ ಪ್ರಯತ್ನಿಸಲಿದೆ. ಇದರಲ್ಲಿ ಯಶಸ್ವಿಯಾದರೆ ಇನ್ನೂ 14 ದಿನಗಳ ಕಾಲ ಈ ಉಪಕರಣಗಳು ಕಾರ್ಯನಿರ್ವಹಿಸಲಿವೆ.

ಚಂದ್ರನಲ್ಲಿ ಮತ್ತೆ ಸೂರ್ಯೋದಯದ ಸಮಯ: ಚಂದ್ರಯಾನ 3 ಉಡ್ಡಯನದ ಭಾಗವಾಗಿ ಚಂದ್ರನ ದಕ್ಷಿಣ ಧ್ರುವದ ಮೇಲಿಳಿದು ಅಲ್ಲಿ 12 ದಿನಗಳ ಕಾಲ ಕಾರ್ಯ ನಿರ್ವಹಿಸಿ ನಿದ್ರೆಗೆ ಜಾರಿದ್ದ ವಿಕ್ರಂ ಲ್ಯಾಂಡರ್‌ ಮತ್ತು ಪ್ರಜ್ಞಾನ್‌ ರೋವರ್‌ಗಳನ್ನು ಮತ್ತೆ ಎಚ್ಚರಿಸುವ ಕಾರ್ಯವನ್ನು ಸೆ.22 ರಂದು ಇಸ್ರೋ ಕೈಗೊಳ್ಳಲಿದೆ. ಒಂದು ವೇಳೆ ಇದರಲ್ಲಿ ಯಶಸ್ವಿಯಾದರೆ ಮತ್ತೆ 14 ದಿನಗಳ ಕಾಲ ಇವು ಕಾರ್ಯ ನಿರ್ವಹಿಸಲಿವೆ.

 

ಚಂದ್ರನ ಮೇಲಿನ ರಾತ್ರಿ ಸಮಯ ಸೆ.21ಕ್ಕೆ ಮುಕ್ತಾಯವಾಗಲಿದ್ದು, ಸೆ.22 ರಂದು ಸೂರ್ಯೋದಯವಾಗಲಿದೆ. ಒಂದು ಲ್ಯಾಂಡರ್‌ ಮತ್ತು ರೋವರ್‌ಗಳು ಮತ್ತೆ ಕಾರ್ಯನಿರ್ವಹಿಸಲು ಆರಂಭಿಸಿದರೆ ಇದು ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಬಹುದೊಡ್ಡ ಹೆಜ್ಜೆಯಾಗಲಿದೆ.

ಚಂದ್ರನ ಮೇಲೆ ಮತ್ತಷ್ಟು ಸಂಶೋಧನೆಗಳನ್ನು ಕೈಗೊಳ್ಳಲು ಇದು ನೆರವು ನೀಡಲಿದೆ. ಚಂದ್ರನ ಮೇಲಿನ 1 ಹಗಲಿನಲ್ಲಿ (ಭೂಮಿಯ 14 ದಿನ) ಕೆಲಸ ಮಾಡಲು ಲ್ಯಾಂಡರ್‌ ಮತ್ತು ರೋವರ್‌ಗಳನ್ನು ಕಳುಹಿಸಲಾಗಿತ್ತು.

ಆದರೆ ಇವುಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ಕಾರಣ 2 ದಿನ ಮೊದಲೇ ಇವುಗಳನ್ನು ಸ್ಲೀಪ್‌ ಮೋಡ್‌ಗೆ ಹಾಕಲಾಗಿತ್ತು. ಚಂದ್ರನಲ್ಲಿ ಸೂರ್ಯನ ಬೆಳಕು ಇಲ್ಲದ ಸಮಯದಲ್ಲಿ ಉಷ್ಣಾಂಶ ಮೈನಸ್‌ 240 ಡಿಗ್ರಿವರೆಗೂ ತಲುಪುತ್ತದೆ. ಹಾಗಾಗಿ ಈ ಉಷ್ಣಾಂಶದಲ್ಲಿ ಯಾವುದೇ ಎಲೆಕ್ಟ್ರಾನಿಕ್‌ ಉಪಕರಣಗಳು ಉಳಿಯುವುದು ಸಾಹಸವೇ ಆಗಿದೆ. ಹಾಗಾಗಿ ಇಸ್ರೋದ ಈ ಪ್ರಯೋಗದ ಮೇಲೆ ಎಲ್ಲಾ ದೇಶಗಳ ಬಾಹ್ಯಾಕಾಶ ಸಂಸ್ಥೆಗಳು ಕಣ್ಣಿಟ್ಟಿವೆ. ಚಂದ್ರನಲ್ಲಿ ಕತ್ತಲು ಬಹಳ ಶೀತಮಯವಾಗಿರುತ್ತದೆ.

 

ಇದನ್ನು ಎದುರಿಸಿ ನಿಲ್ಲಲು ಸಾಧ್ಯವಾದರೆ, ಮಿಷನ್‌ ತನ್ನ ಅದ್ಭುತ ಸಂಶೋಧನೆಗಳನ್ನು ಮತ್ತೆ ಆರಂಭಿಸುವ ಭರವಸೆಯನ್ನು ಇದ್ರೋ ಹೊಂದಿದೆ. ವಿಕ್ರಮ್ ಮತ್ತು ಪ್ರಗ್ಯಾನ್ ಜೊತೆಗಿನ ಯಶಸ್ವಿ ಮರುಸಂಪರ್ಕವು ಬಾಹ್ಯಾಕಾಶ ಪರಿಶೋಧನೆ ಕ್ಷೇತ್ರದಲ್ಲಿ ಅದರ ಸ್ಥಿತಿಸ್ಥಾಪಕತ್ವ ಮತ್ತು ತಾಂತ್ರಿಕ ಪರಾಕ್ರಮವನ್ನು ಪ್ರದರ್ಶಿಸುವ ಮೂಲಕ ಇಸ್ರೋಗೆ ಮತ್ತೊಂದು ಗರಿಯಾಗಿದೆ. ಜಗತ್ತು ವೀಕ್ಷಿಸುತ್ತಿರುವಂತೆ, ಶಿವಶಕ್ತಿ ಪಾಯಿಂಟ್‌ನ ಸೂರ್ಯೋದಯವು ಚಂದ್ರನ ಅನ್ವೇಷಣೆಯಲ್ಲಿ ಹೊಸ ಅಧ್ಯಾಯದ ಉದಯವನ್ನು ಗುರುತಿಸಬಹುದು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಪಹಾರಕೂಟದಲ್ಲೇ ರಾಜೀನಾಮೆ ಸುಳಿವು ನೀಡಿದ ಸಿಎಂ : ಸಹೋದ್ಯೋಗಿಗಳ ಸಮ್ಮುಖದಲ್ಲೇ ರಾಜೀನಾಮೆ  ಘೋಷಿಸಿದ ಸಿದ್ದರಾಮಯ್ಯ..!ಬೆಳಗಾವಿಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ...ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆ