Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೂಧಗಂಗಾ ನದಿಯಲ್ಲಿ ದುರಂತ : ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲು

 

ಬೆಳಗಾವಿ : ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರು ಪಾಲಾಗಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಕಾಗಲ ತಾಲೂಕಿನ ಬಸ್ತವಾಡೆ ಸೇತುವೆ ಬಳಿ ನಡೆದಿದ್ದು, ಬೆಳಗಾವಿ ಜಿಲ್ಲೆ ಅಥಣಿಯ ಇಬ್ಬರು ಮೃತಪಟ್ಟವರಲ್ಲಿ ಸೇರಿದ್ದಾರೆ.

ಭಾರಿ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ದೂಧಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮುಳುಗಿ ನಾಲ್ವರು ಮೃತಪಟ್ಟರು. ಗ್ರಾಮಸ್ಥರು ಇಬ್ಬರು ಮಹಿಳೆಯರು ಸೇರಿ 3 ಮಂದಿಯ ಶವಗಳನ್ನು ನದಿಯಿಂದ ಹೊರಕ್ಕೆ ತೆಗೆದಿದ್ದಾರೆ. ಇನ್ನೂ ಒಬ್ಬನ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆದಿದೆ.

ಮೃತರಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿಗಳು. ರೇಶ್ಮಾ ದಿಲೀಪ ಯಳಮಲೆ (34) ಹಾಗೂ ಯಶ್ ದಿಲೀಪ್ ಯಳಮಲೆ (17) ಇವರಿಬ್ಬರೂ ಕಾಗಲ ತಾಲೂಕಿನ ಅನ್ನುರ ಗ್ರಾಮದ ಜಾತ್ರೆಗೆ ಸಂಬಂಧಿಕರ ಮನೆಗೆ ಬಂದಿದ್ದರು. ಇನ್ನಿಬ್ಬರು ಕೊಲ್ಲಾಪುರ ಜಿಲ್ಲೆಯವರು. ಕೊಲ್ಲಾಪುರ ಜಿಲ್ಲೆಯ ಮುರಗುಡ ನಿವಾಸಿ ಜಿತೇಂದ್ರ ಲೋಕರೆ (36) ಹಾಗೂ ಕೊಲ್ಲಾಪುರ ಜಿಲ್ಲೆಯ ರೂಕಡಿ ಗ್ರಾಮದ ನಿವಾಸಿ ಸವಿತಾ ಅಮರ ಕಾಂಬಳೆ (27). ಕಾಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಸಿಲಿನ ಝಳದಿಂದ ಪಾರಾಗಲು ಮಧ್ಯಾಹ್ನದ ವೇಳೆಯೂ ನದಿಯಲ್ಲಿ ಅಪಾರ ಜನಸಂದಣಿ ಇರುತ್ತದೆ. ಅಲ್ಲದೆ ಪ್ರಸ್ತುತ ಹಳ್ಳಿಗಳಲ್ಲಿ ಜಾತ್ರೆ, ಯಾತ್ರೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಈಜುವುದರ ಜೊತೆಗೆ ಬಟ್ಟೆ ಒಗೆಯಲು ನದಿಗೆ ಹೋಗುತ್ತಾರೆ. ಇದರಿಂದಾಗಿ ಸಂಜೆಯವರೆಗೂ ನದಿ, ಕೆರೆಯಲ್ಲಿ ಜನಜಂಗುಳಿ ಕಂಡು ಬರುತ್ತಿದೆ.

ಹಳ್ಳಿಗಳಲ್ಲಿ ಜಾತ್ರೆ, ಯಾತ್ರೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಈಜುವುದರ ಜೊತೆಗೆ ಬಟ್ಟೆ ಒಗೆಯುವುದಕ್ಕೂ ನದಿಯನ್ನು ಬಳಸುತ್ತಾರೆ. ಇದರಿಂದಾಗಿ ಸಂಜೆಯವರೆಗೂ ನದಿ, ಕೆರೆಯಲ್ಲಿ ಜನಜಂಗುಳಿ ಕಂಡು ಬರುತ್ತಿದೆ. ನದಿಯಲ್ಲಿ ಸುರಕ್ಷಿತವಾಗಿ ಈಜುವತ್ತ ಗಮನ ಹರಿಸಬೇಕಾದ ಅಗತ್ಯವಿದ್ದರೂ ನಿರ್ಲಕ್ಷದಿಂದ ಹಲವು ಅವಘಡಗಳು ಸಂಭವಿಸುತ್ತಿರುವುದು ಕಂಡು ಬಂದಿದೆ. ಜಿಲ್ಲೆಯಲ್ಲಿ ಈ ಬೇಸಿಗೆಯಲ್ಲಿ ಇಂತಹ ಹಲವು ಅವಘಡಗಳು ನಡೆದಿವೆ.

ದೂಧಗಂಗಾ ನದಿಯ ಬಸ್ತವಾಡೆ ಬ್ಯಾರೇಜ್ ಬಳಿ ನದಿಯಲ್ಲಿ ಈಜಲು ಇಂದು ಮಧ್ಯಾಹ್ನ ಕೆಲವರು ನದಿಗೆ ಇಳಿದಿದ್ದರು. ನೀರು ಊಹಿಸಲೂ ಸಾಧ್ಯವಾಗದ ಕಾರಣ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರಲ್ಲಿ ಮೂವರನ್ನು ರಕ್ಷಿಸಲಾಗಿದೆ. ರಕ್ಷಣಾ ತಂಡ ಸ್ಥಳಕ್ಕೆ ತಲುಪಿದೆ. ಈ ಮಾಹಿತಿ ತಿಳಿದ ತಕ್ಷಣ ಆ ಪ್ರದೇಶದಲ್ಲಿ ಸಾವಿರಾರು ಜನ ಜಮಾಯಿಸಿದರು.

ಈ ಬಗ್ಗೆ ರಕ್ಷಣಾ ತಂಡದ ಸದಸ್ಯ ಬಸ್ತವಾಡೆಯ ಪ್ರಮೋದ ಪಾಟೀಲ ಮಾತನಾಡಿ, ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದೆವು. ಆಗ ಕೆಲವರು ಈಜಲು, ಬಟ್ಟೆ ಒಗೆಯಲು ಬಂದರು. ನೀರು ಊಹಿಸಲು ಸಾಧ್ಯವಾಗದ ಕಾರಣ, ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಕಿರುಚಾಟ ಕೇಳಿ ನಾವು ಸಹಾಯಕ್ಕೆ ಧಾವಿಸಿದೆವು. ನದಿಗೆ ಹಾರಿದ ಬಳಿಕ ಸ್ವಲ್ಪ ದೂರದಲ್ಲಿ ಮೂವರನ್ನು ರಕ್ಷಿಸಲಾಯಿತು. ಒಬ್ಬರು ತುಂಬಾ ದೂರದಲ್ಲಿದ್ದು ತಲುಪಲಾಗಲಿಲ್ಲ.

ಮಧ್ಯಾಹ್ನದ ವೇಳೆಗೆ ಆನೂರು ಮತ್ತು ಬಸ್ತವಾಡೆ ಗ್ರಾಮದ ಕಾರ್ಯಕರ್ತರು ಅಪಘಾತದ ಕುರಿತು ಸಚಿವ ಹಸನ್ ಮುಶ್ರೀಫ್ ಅವರಿಗೆ ಮಾಹಿತಿ ನೀಡಿದರು. ಸ್ಪೇನ್‌ನಲ್ಲಿರುವ ಮುಶ್ರಿಫ್ ಅವರು ತಕ್ಷಣ ಜಿಲ್ಲಾಧಿಕಾರಿ ಅಮೋಲ್ ಯೆಡ್ಗೆ ಮತ್ತು ತಹಸೀಲ್ದಾರ್ ಅಮರ್ ವಾಕಡೆ ಅವರನ್ನು ಸಂಪರ್ಕಸಿದರು.

 
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?