Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭೈರಪ್ಪ ಸ್ಮರಣೆ : ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಮನ ಕಾರ್ಯಕ್ರಮ

ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ, ಖ್ಯಾತ ಕನ್ನಡ ಕಾದಂಬರಿಕಾರ, ಈಚೆಗೆ ಅಗಲಿದ ಎಸ್. ಎಲ್. ಭೈರಪ್ಪ ಅವರಿಗೆ ನಮನ ಸಲ್ಲಿಸಲು “ನುಡಿ ನಮನ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.



ಸಾಹಿತಿ ಡಾ. ರಾಮಕೃಷ್ಣ ಮರಾಠೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಎಸ್. ಎಲ್. ಭೈರಪ್ಪ ಅವರು ಕೇವಲ ಕರ್ನಾಟಕದ ಕಾದಂಬರಿಕಾರರಾಗಿರಲಿಲ್ಲ, ದೇಶದ ಮಹೋನ್ನತ ಕಾದಂಬರಿಕಾರರಾಗಿದ್ದರು ಎಂದು ಹೇಳಿದರು.

ಭೈರಪ್ಪ ಅವರ ಜೀವನಯಾತ್ರೆಯಲ್ಲಿ ಮಾರ್ಗದರ್ಶಕರಾದ ಹಾಗೂ ಅವರ ವ್ಯಕ್ತಿತ್ವವನ್ನು ರೂಪಿಸಲು ಪ್ರೇರಣೆಯಾದವರ ಪಾತ್ರವನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು. ಬಡತನವು ಕೆಲವೊಮ್ಮೆ ಜೀವನದಲ್ಲಿ ಶಕ್ತಿ ಮತ್ತು ಸ್ವಭಾವವನ್ನು ರೂಪಿಸುವಂತಾಗಬಹುದು ಎಂಬುದನ್ನು ವಿವರಿಸಿದರು.

ಪ್ರಾಂಶುಪಾಲ ಡಾ. ಎಚ್. ಎ. ಹವಾಲ್ದಾರ ಅಧ್ಯಕ್ಷತೆ ವಹಿಸಿ, ಭೈರಪ್ಪ ಅವರ ಕಾದಂಬರಿಯನ್ನೂ ಓದಲು, ಅದರ ಮಹತ್ವವನ್ನು ಅರಿತುಕೊಳ್ಳಲು ಪ್ರೇರೇಪಿಸಿದರು. ವಿದ್ಯಾರ್ಥಿಗಳಾದ ಫಣಿ ರಾಘವೇಂದ್ರ ಮತ್ತು ಸಹನಾ ವಾಲಿ ಅವರು ಎಸ್. ಎಲ್. ಭೈರಪ್ಪ ಅವರ ಜೀವನ ಮತ್ತು ಸಾಧನೆಗಳ ಕುರಿತು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಭೈರಪ್ಪ ಅವರ ಕೃತಿಗಳು ಮತ್ತು ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆಗಳನ್ನು ಪ್ರತಿಬಿಂಬಿಸುವ ವಿಶಿಷ್ಟ ಪುಸ್ತಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪ್ರೊ. ಎಂ. ಎಸ್. ಕುಲಕರ್ಣಿ ಹಾಗೂ ಕನ್ನಡ ಬಳಗದ ಅಧ್ಯಕ್ಷೆ ಪ್ರೊ. ಮೋನಿಶಾ ಸ್ವಾಮಿ ಅವರು ಆಯೋಜಿಸಿದ್ದರು. ಸಾಹಿತ್ಯ ಕ್ಲಬ್‌ನ ಕಾರ್ಯದರ್ಶಿ ಓಂಕಾರ ಪಾಟೀಲ ವಂದಿಸಿದರು. ಎಲ್ಲಾ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?