Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಗೆ ವಂದೇ ಭಾರತ್ ಬಂದೇ ಬರುತ್ತಾ ?

ಬೆಳಗಾವಿ : ಲೋಕಸಭಾ ಸದಸ್ಯ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನೈರುತ್ಯ ವಲಯದ ರೈಲ್ವೆ ಪ್ರಧಾನ ವ್ಯವಸ್ಥಾಪಕ ( ಜಿ.ಎಮ್ ) ಅರವಿಂದ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ, ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದರು.

ಬೆಂಗಳೂರು - ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್:
ಪ್ರಸ್ತಾಪಿತ ರೈಲು ಸಂಚಾರವನ್ನು ಬೆಳಗಾವಿವರೆಗೆ ವಿಸ್ತರಿಸುವುದು ಬಹಳ ಅವಶ್ಯವಿದ್ದು ಮತ್ತು ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯೂ ಸಹ ಆಗಿದೆ. ಆದಕಾರಣ ಈ ರೈಲಿನ ಪ್ರವಾಸದ ಅಲ್ಪ ಸಮಯ ಬದಲಾವಣೆಯೊಂದಿಗೆ ಇದು ಸಾಧ್ಯವಿದ್ದು ಪ್ರಯುಕ್ತ ಈ ವಿಷಯವನ್ನು ಗಂಭೀರವಾಗಿ ಅವಲೋಕಿಸಿ ಕ್ರಮವನ್ನು ಜರುಗಿಸಲು ರೈಲ್ವೆ ಮಹಾಪ್ರಬಂಧಕರಿಗೆ ತಿಳಿಸಲಾಯಿತು.

ಬೆಳಗಾವಿ-ಮಿರಜ್ ನಡುವೆ ದಿನನಿತ್ಯ ಸಂಚರಿಸುವ ರೈಲು:
ಈ ರೈಲು ಸೇವೆಯನ್ನು ಪ್ರತಿ ಮಾಹೆ ಮುಂದುವರಿಸುತ್ತಾ ಬಂದಿದ್ದು, ಇದರ ಸೇವೆಯನ್ನು ಖಾಯಂ ಮಾಡುವಂತೆಯೂ ಮತ್ತು ಇದನ್ನು "ಮೆಮು"ರೈಲನ್ನಾಗಿ ಪರಿವರ್ತಿಸುವ ಬಗ್ಗೆ ಕ್ರಮವನ್ನು ಜರುಗಿಸಲು ಸೂಚಿಸಲಾಯಿತು.

ಲೋಕಾಪುರ - ರಾಮದುರ್ಗ - ಸವದತ್ತಿ - ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ :
ಪ್ರಸ್ತಾಪಿತ ರೈಲು ಮಾರ್ಗ ನಿರ್ಮಾಣ ಅವಶ್ಯಕತೆ ಇದ್ದು, ಈ ಕುರಿತು ಮುಂಚಿತ ಸಮೀಕ್ಷೆ ನಡೆಸುವುದು ಅವಶ್ಯಕ. ಈ ನಿಟ್ಟಿನಲ್ಲಿ ಕೂಡಲೇ ಮುಂದಿನ ಅಗತ್ಯ ಕ್ರಮವನ್ನು ಜರುಗಿಸಲು ಸೂಚಿಸಿ, ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ (ಜಿ.ಎಮ್ ) ಅವರಿಗೆ ಮನವಿ ಸಲ್ಲಿಸಿದರು.

ಎಲ್ಲ ಬೇಡಿಕೆಗಳನ್ನು ಅವಲೋಕಿಸಿದ ರೈಲ್ವೆ ಪ್ರಧಾನ ವ್ಯವಸ್ಥಾಪಕರು (ಜಿ.ಎಮ್ ) ಈ ಕುರಿತು ಶೀಘ್ರ ಅನುಕೂಲಕರವಾದ ಕ್ರಮವನ್ನು ಕೈಗೊಳ್ಳುವುದಾಗಿ ಪ್ರಸ್ತಾಪಿಸಿದರೆಂದು ಜಗದೀಶ ಶೆಟ್ಟರ ತಿಳಿಸಿದ್ದಾರೆ.

ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಭಾಗವಹಿಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?