Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತ್ನಿ ಸ್ಪರ್ಧೆ ಬಗ್ಗೆ ಬೆಳಗಾವಿಯಲ್ಲಿ ಶಿವರಾಜ್ ಕುಮಾರ್ ಹೇಳಿದ್ದೇನು ?

ಬೆಳಗಾವಿ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೀತಾ ಶಿವರಾಜಕುಮಾರ್ ಅವರ ಬಗ್ಗೆ ನಟ ಶಿವರಾಜ್ ಕುಮಾರ್ ಮಹತ್ವದ ಮಾತು ಆಡಿದ್ದಾರೆ. ಕರಟಕ ದಮನಕ ಚಿತ್ರದ ಪ್ರಚಾರಕ್ಕೆ ಸೋಮವಾರ ಬೆಳಗಾವಿಗೆ ಆಗಮಿಸಿದ್ದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಪತ್ನಿ ಗೀತಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಅವರ ಗೆಲುವಿಗೆ ಬೆಂಬಲವಾಗಿ ನಿಲ್ಲುವುದು ನನ್ನ ಕರ್ತವ್ಯ. ಸಮಯ ಸಿಕ್ಕರೆ ಕಾಂಗ್ರೆಸ್ ಪಕ್ಷದ ಇತರ ಅಭ್ಯರ್ಥಿಗಳ ಪ್ರಚಾರಕ್ಕೆ ಹೋಗುವೆ. ಈ ವರ್ಷ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ. ಬಿಸಿಲು ಹೆಚ್ಚಿರುವ ಕಾರಣ ನಟರನ್ನು ಕರೆತರಲ್ಲ. ನಾನು ಕರೆದರೆ ಅವರೆಲ್ಲ ಬರುತ್ತಾರೆ. ಆದರೆ ಯಾರಿಗೂ ತೊಂದರೆ ಕೊಡಲು ನನಗೆ ಇಷ್ಟವಿಲ್ಲ.

ಗೀತಾ ಅವರ ತವರು ಶಿವಮೊಗ್ಗ. ಅಲ್ಲಿ ಶಿಕ್ಷಣ ಪಡೆದಿದ್ದಾರೆ. ಆದ ಕಾರಣ ಶಿವಮೊಗ್ಗದಿಂದ ಸ್ಪರ್ಧಿಸುತ್ತಿದ್ದು ಮನೆಯನ್ನು ಮಾಡಲಾಗಿದೆ. ಈ ಬಾರಿ ಗೀತಾ ಗೆಲುವಿನ ವಿಶ್ವಾಸವಿದೆ. ಜನಪ್ರತಿನಿಧಿಯಾದರೆ ಜನಸೇವೆ ಮಾಡಲು ಶಕ್ತಿ ಸಿಗುತ್ತದೆ. ರಾಜಕಾರಣದ ಅಗತ್ಯವಿದೆ. ಈ ಸಲ ಗೀತಾರನ್ನು ಗೆಲ್ಲಿಸಲು ಯೋಜನೆ ರೂಪಿಸಲಾಗಿದೆ. ಕಳಸಾ ಬಂಡೂರಿ ಹೋರಾಟಕ್ಕೆ ನಟರು ಬರಬೇಕು. ಈ ಸಲ ಹೋರಾಟ ಆರಂಭವಾದರೆ ನಾನೇ ಖುದ್ದು ಎಲ್ಲ ನಟರನ್ನು ಕರೆದುಕೊಂಡು ಬರುವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಕುಟುಂಬದವರನ್ನು ಒಂದಾಗಿಸಲು ನಾನು ಯಾರು ? ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಅವರ ಮನೆಯ ಅಳಿಯ. ಅವರೇ ಒಂದಾಗಬೇಕು. ನಾನೇನು ಮಾಡಲು ಸಾಧ್ಯವಿಲ್ಲ ತಿಳಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು